On the occasion of of the 104th birth anniversary celebrations of Late Shri Mahadevappa Rampure, Founder-President of the Hyderabad Karnataka Education Society, Kalaburagi, the management has organized a felicitation ceremony to honour the retired staff members. The event was held on Saturday, 1st August 2026, at the P.D.A. Auditorium, Student Activity Centre, Kalaburagi.
The occasion was also used to felicitate the talented students of the Society's V.G. Women's Pre-University College, who secured first rank at the state level and first rank at the district level in the 2025–26 Second PUC Annual Examinations.
The event was attended by the Society's President, Vice-President, Secretary, members of the Governing Council, staff, and other dignitaries.
On the occasion of the birth anniversary of the late Shri. Mahadevappa Rampure — the educational architect, political statesman, freedom fighter, and Founder-President of the Hyderabad Karnataka Education Society for Kalyana Karnataka — the celebrations were held with great enthusiasm at the Society's Mahadevappa Rampure Medical College, the Head Office, and various affiliated schools, colleges & other institutions.

Sri Mahadevappa Rampure was a visionary leader and educationist who founded HKE Society in 1958. He dedicated his life to providing quality education, transforming Hyderabad Karnataka region into an educational hub. His legacy inspires generations, and HKE Society continues to grow with over 50+ educational institutions. Today, we remember his selfless service and vision on his 53rd death anniversary 💐

77ನೇ ಗಣರಾಜ್ಯೋತ್ಸವದ ಪ್ರಯುಕ್ತ, ಸಂಸ್ಥೆಯ ಕಚೇರಿಯಲ್ಲಿ ಮತ್ತು ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ, ಅಧ್ಯಕ್ಷರಾದ ಡಾ. ಶಶೀಲ್ ನಮೋಶಿ ಧ್ವಜಾರೋಹಣ ನೆರೆವೇರಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶ್ರೀ. ರಾಜಾ ಭೀಮಳ್ಳಿ, ಕಾರ್ಯದರ್ಶಿಗಳಾದ ಶ್ರೀ ಉದಯ ಕುಮಾರ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ, ಡಾ. ಕೈಲಾಸ ಪಾಟೀಲ ಮತ್ತು ಆಡಳಿತ ಮಂಡಳಿಯ ಸದಸ್ಯರು, ಭೋದಕ, ಭೋದಕೆತರ ಸಿಬ್ಬಂದಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಶ್ರೀ ಶಶಿಲ್ ಜಿ ನಮೋಶಿ, ಎಂ ಎಲ್ ಸಿ, ಮತ್ತು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಇವರ ಶೈಕ್ಷಣಿಕ, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಶರಣಬಸವ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರ ಪ್ರಯುಕ್ತ ಇಂದು, ದಿ. 20-12-2025, ಸಂಸ್ಥೆಯ ಪಿ.ಡಿ.ಎ. ಸಭಾಂಗಣದಲ್ಲಿ ಸಂಸ್ಥೆಯ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿ, ಆಡಳಿತ ಮಂಡಳಿಯ ಸದಸ್ಯರು, ವಿವಿಧ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಕಲಬುರಗಿಯ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಚೇರಿಯಲ್ಲಿಂದು ವಕೀಲರ ದಿನದ ಪ್ರಯುಕ್ತ 50 ವರ್ಷ ವಕೀಲಿಕೆ ವೃತ್ತಿಯನ್ನು ಪೂರ್ಣಗೊಳಿಸಿದ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಆಡಳಿತ ಮಂಡಳಿಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

76ನೇ ವರ್ಷದ ಕಲ್ಯಾಣ ಕರ್ನಾಟಕ ಉತ್ಸವದ ಪ್ರಯುಕ್ತ, ಸಂಸ್ಥೆಯ ಕಚೇರಿಯ ಆವರಣದಲ್ಲಿ, ಅಧ್ಯಕ್ಷರಾದ, ಶ್ರೀ. ಶಶಿಲ್ ಜಿ ನಮೋಶಿಯವರು ಧ್ವಜಾರೋಹಣ ನೆರೆವೇರಿಸಿದರು.
ಈ ಸಂದರ್ಭದಲ್ಲಿ, ಆಡಳಿತ ಮಂಡಳಿಯ ಸರ್ವಸದಸ್ಯರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ, ಅಗಸ್ಟ್ 14 ರಂದು ಲಿಂಗೈಕ್ಯರಾದ ಪರಮ ಪೂಜ್ಯ ಶ್ರೀ ಶರಣವಪ್ಪ ಅಪ್ಪ, 8ನೇ ಪೀಠಾಧಿಪತಿಗಳು, ಶ್ರೀ ಶರಣಬಸವೇಶ್ವರ ಸಂಸ್ಥಾನ ಮತ್ತು ಮಾಜಿ ಅಧ್ಯಕ್ಷರು, ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ, ಇವರಿಗೆ ಸಂಸ್ಥೆಯ ವತಿಯಿಂದ ನಡೆದ ಶೃದ್ಧಾಂಜಲಿಯ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ಕೊಟ್ಟು ಪ್ರಪಂಚದ ಮೊದಲ ಪಾರ್ಲಿಮೆಂಟ್ ಪ್ರಾರಂಭವಾಗಿದ್ದು ಕಲ್ಯಾಣ ಕರ್ನಾಟಕದಲ್ಲಿ ಅಣ್ಣ ಬಸವಣ್ಣನವರ ನೇತೃತ್ವದಲ್ಲಿ. ಅಂತಹ ವಿಶ್ವ ಗುರು ಬಸವಣ್ಣ ಭಾರತದ ಶಕ್ತಿ ಕೇಂದ್ರ ಸಂಸತ್ತು ಮುಂದೆ ಇರಬೇಕೆಂದು ಬಯಸಿ ಸ್ವತಃ ಅದರ ಸಂಪೂರ್ಣ ಖರ್ಚು ವೆಚ್ಚ ಭರಿಸಿ ಸಂಸತ್ತಿನ 9 ನೇ ಗೇಟ್ ಮುಂದೆ ಬಸವಣ್ಣನ ಪುತ್ಥಳಿ ಸ್ಥಾಪಿಸಿ ಕಲ್ಯಾಣ ನಾಡಿನ ಕೀರ್ತಿಯನ್ನು ಹೆಚ್ಚಿಸಿದವರು, ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಕಲ್ಯಾಣ ಕರ್ನಾಟಕದ ಕಲಬುರ್ಗಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗುಣಮಟ್ಟದ ಶೈಕ್ಷಣಿಕ ಕ್ರಾಂತಿಯ ಪಿತಾಮಹ ಲಿಂಗೈಕ್ಯ ಡಾ ಶರಣಬಸಪ್ಪ ಅಪ್ಪ ಎಂದು ನುಡಿ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿ, ಹಾಗೂ ಸರ್ವ ಆಡಳಿತ ಮಂಡಳಿಯ ಸದಸ್ಯರು, ವಿವಿಧ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇಂದು ಕಲಬುರಗಿಯ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಆರ್. ಮೆಡಿಕಲ್ ಕಾಲೇಜು ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ, ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಮುತ್ಸದ್ದಿ ರಾಜಕಾರಣಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ದಿ. ಮಹಾದೇವಪ್ಪ ರಾಂಪುರೆ ಅವರ 104ನೇ ಜನ್ಮದಿನಾಚರಣೆ ಅಂಗವಾಗಿ ಅವರ ಸಮಾಧಿ ಸ್ಥಳದಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಶಿಲ್ ಜಿ ನಮೋಶಿ ಅವರಿಂದ ಪೂಜೆ ಸಲ್ಲಿಸಲಾಯಿತು ಹಾಗೂ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ
ಶ್ರೀ ರಾಜಾ ಭೀಮಳ್ಳಿ, ಕಾರ್ಯದರ್ಶಿಗಳಾದ ಶ್ರೀ ಉದಯ ಕುಮಾರ್ ಚಿಂಚೋಳಿ, ಜಂಟಿ - ಕಾರ್ಯದರ್ಶಿಗಳಾದ ಡಾ. ಕೈಲಾಸ ಪಾಟೀಲ, ಕಾಲೇಜು ಮತ್ತು ಆಸ್ಪತ್ರೆಯ ಸಂಚಾಲಕರಾದ ಡಾ. ಶರಣಬಸಪ್ಪ ಹಾರ್ವಾಳ ಮತ್ತು ಡಾ. ಕಿರಣ ದೇಶಮುಖ ಹಾಗೂ ಸರ್ವ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
